Sunday, June 29, 2025
spot_imgspot_img
spot_imgspot_img

ಕುಂದಾಪುರ: ಕಾಂತಾರಾ-2 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವು

- Advertisement -
- Advertisement -

ಕುಂದಾಪುರ: ಉಡುಪಿ: ಕಾಂತಾರ 2 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂದು ಗುರುತಿಸಲಾಗಿದೆ.

ಕೊಲ್ಲೂರು ಭಾಗದಲ್ಲಿ ‘ಕಾಂತಾರ ಚಾಪ್ಟರ್ 1’ ಶೂಟಿಂಗ್ ನಡೆಯುತ್ತಿತ್ತು. ಶೂಟಿಂಗ್ ಮುಗಿಸಿ ಕಪಿಲ್‌ ಮತ್ತು ತಂಡ ಸೌಪರ್ಣಿಕ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಕಪಿಲ್‌ ಮೃತದೇಹವನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ನಾಳೆ ಕಪಿಲ್ ಅವರ ಮನೆಯವರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಕಾಂತಾರಕ್ಕೆ ಒಂದಲ್ಲ ಒಂದು ಗಂಡಾಂತರ ಎದುರಾಗುತ್ತಲೇ ಇದೆ. ದೈವ ನುಡಿಯಂತೆ ಚಿತ್ರೀಕರಣಕ್ಕೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿದ್ದು, ಈ ಹಿಂದೆ ಕೊಲ್ಲೂರಿನಲ್ಲೇ ಜೂನಿಯರ್ ಆರ್ಟಿಸ್ಟ್ ಗಳಿದ್ದ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿತ್ತು. ಬಳಿಕ ಗಾಳಿ ಮಳೆಗೆ ಬೃಹತ್ ಸೆಟ್ ಹಾರಿ ಹೋಯಿತು. ಇದರ ಬೆನ್ನಲ್ಲೇ ಜೂನಿಯರ್ ಆರ್ಟಿಸ್ಟ್ ದಾರುಣ ಸಾವನ್ನಪ್ಪಿದ್ದ ಘಟನೆ ನಡೆದಿದೆ.

- Advertisement -

Related news

error: Content is protected !!