Monday, June 30, 2025
spot_imgspot_img
spot_imgspot_img

ಎಲ್‌ಒಸಿಯಲ್ಲಿ ಪಾಕ್‌ ಗುಂಡಿನ ದಾಳಿ; ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮ

- Advertisement -
- Advertisement -

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ.

ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ಹುತಾತ್ಮರಾಗಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಈ ಘಟನೆ ಸಂಭವಿಸಿದೆ. ವಿವಿಧ ವಲಯಗಳಲ್ಲಿ ಗಡಿಯಾಚೆಗಿನ ಶೆಲ್ ದಾಳಿ ಹೆಚ್ಚಾಗಿದೆ ಎಂದು ವರದಿಯಾಗಿದೆ.

ಗುಂಡಿನ ಚಕಮಕಿಯ ಸಮಯದಲ್ಲಿ ಗಾಯಗೊಂಡಾಗ ಮುರಳಿ ನಾಯಕ್ ಮುಂಚೂಣಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಮುರಳಿ ನಾಯ್ಕ್ ಅವರ ಪಾರ್ಥಿವ ಶರೀರ ಮೇ.10ರ ವೇಳೆಗೆ ಸ್ವಗ್ರಾಮಕ್ಕೆ ತಲುಪಲಿದೆ.

ಗುರುವಾರ ರಾತ್ರಿ ಭಾರತದ ವಿರುದ್ಧ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿತು. ಈ ವೇಳೆ ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿ ಪಾಕ್‌ಗೆ ತಿರುಗೇಟು ನೀಡಿದೆ. ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಮುರಳಿ ನಾಯ್ಕ್ ಅವರಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!