- Advertisement -
- Advertisement -
ಬೆಂಗಳೂರು: ಹೆಮ್ಮಾರಿ ಕೊರೊನಾ ಹೊಡೆತದಿಂದ ಕಂಗೆಟ್ಟಿರೋ ರಾಜ್ಯದ ಜನರಿಗೆ ಆರೋಗ್ಯ ಇಲಾಖೆ ಗುಡ್ ನ್ಯೂಸ್ ನೀಡಲು ಸಿದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರ್ವಜನಿಕರ ಆರೋಗ್ಯ ಬಲವರ್ಧನೆಗೆ ಸರ್ಕಾರ ಚಿಂತನೆ ನಡೆಸಿದ್ದು 2021ರ ಜನವರಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ವೈದ್ಯಕೀಯ ಪರೀಕ್ಷೆಗಳನ್ನ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಸಿ.ಟಿ ಸ್ಕ್ಯಾನ್, ರಕ್ತ ಪರೀಕ್ಷೆ ಸೇರಿದಂತೆ ಎಲ್ಲ ರೀತಿಯ ಆರೋಗ್ಯ ಸೇವೆ ಉಚಿತವಾಗಿ ನಡೆಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಯೋಜನೆಯಿಂದಾಗಿ ಎಪಿಎಲ್ ಕಾರ್ಡುದಾರರಿಗೆ ಈವರೆಗೆ ವಿಧಿಸಲ್ಪಡುತ್ತಿದ್ದ ಅಲ್ಪ ಪ್ರಮಾಣದ ಶುಲ್ಕವೂ ರದ್ದಾಗಲಿದೆ.
ಈ ಬಗ್ಗೆ ಆಲ್ ಇಂಡಿಯಾ ರೇಡಿಯೋ ಟ್ವಿಟರ್ ಖಾತೆಯಲ್ಲಿ ಅಧಿಕೃತ ಮಾಹಿತಿ ಪ್ರಕಟವಾಗಿದೆ. ಆರೋಗ್ಯ ಇಲಾಖೆಯ ಮಹತ್ವದ ಆದೇಶವೆಂದು ಹೇಳಲಾಗುತ್ತಿದೆ.
- Advertisement -