Monday, June 30, 2025
spot_imgspot_img
spot_imgspot_img

ಉಪ್ಪಿನಂಗಡಿ: ದೊಣ್ಣೆಯಿಂದ ಹೊಡೆದು ಯುವಕನ ಕೊಲೆ; ಆರೋಪಿಯ ಬಂಧನ..!

- Advertisement -
- Advertisement -

ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶುಕ್ರವಾರ ಶರತ್ ಕುಮಾರ್ (34) ಎಂಬ ಯುವಕನನ್ನು ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದ ಆರೋಪಿಯನ್ನು ಭಾನುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹರಿಪ್ರಸಾದ್ ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಚಿಕ್ಕಪ್ಪನ ಮನೆಮಂದಿಯೊಂದಿಗೆ ಜಗಳವಾಡುತ್ತಿದ್ದ ಶರತ್ ಕುಮಾರ್‌ನನ್ನು ಆತನ ಚಿಕ್ಕಪ್ಪನ ಮನೆಯಂಗಳದಲ್ಲಿಯೇ ಹೊಡೆದು ಕೊಲ್ಲಲಾಗಿತ್ತು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪೆರಿಯಶಾಂತಿಯಲ್ಲಿದ್ದ ಆರೋಪಿ ಹರಿಪ್ರಸಾದ್‌ನನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!