Tuesday, April 30, 2024
spot_imgspot_img
spot_imgspot_img

ಮುನಿರತ್ನ ಹಾಗೂ ರಾಜೇಶ್​ ಗೌಡ ಪ್ರಮಾಣವಚನ ಸ್ವೀಕಾರ

- Advertisement -G L Acharya panikkar
- Advertisement -

ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಚುನಾಯಿತರಾದ ನೂತನ ಬಿಜೆಪಿ ಶಾಸಕರಾದ ಮುನಿರತ್ನ ನಾಯ್ಡು ಹಾಗೂ ರಾಜೇಶ್​ ಗೌಡ ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಮುನಿರತ್ನ, ರಾಜರಾಜೇಶ್ವರಿ ದೇವಿಯ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕಾರ ಮಾಡಿದರು.

ರಾಜೇಶ್​ ಗೌಡ ಭಗವಂತನ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ 58 ಸಾವಿರ ಮತಗಳಿಂದ ಮುನಿರತ್ನ ಹಾಗೂ ಶಿರಾ ಕ್ಷೇತ್ರದಲ್ಲಿ 13 ಸಾವಿರ‌ ಮತಗಳಿಂದ ರಾಜೇಶ್ ಗೌಡ ಜಯಸಾಧಿಸಿದ್ದರು.

- Advertisement -

Related news

error: Content is protected !!