Saturday, June 28, 2025
spot_imgspot_img
spot_imgspot_img

ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಭಾರಿ ಗಾತ್ರದ ಮರ; ತಪ್ಪಿದ ಅನಾಹುತ..!

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಗಾಳಿ-ಮಳೆಯ ಅಬ್ಬರ ಜೋರಾಗಿದ್ದು ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಚಾರ್ಮಾಡಿ ಘಾಟ್‌ನಲ್ಲಿ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ರಸ್ತೆಗೆ ಭಾರಿ ಗಾತ್ರದ ಮರ ಬಿದ್ದಿದೆ. ಧರ್ಮಸ್ಥಳದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಸಾಗುತ್ತಿದ್ದ ಸಮಯದಲ್ಲಿ ದೊಡ್ಡ ಮರ ಬಿದ್ದಿದೆ. ಕಾರು ಮುಂದಕ್ಕೆ ಪಾಸ್ ಆಗುತ್ತಿದ್ದಂತೆ ರಸ್ತೆಗೆ ಮರ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯ ಯುವಕರು ಹಾಗೂ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ, ರಸ್ತೆಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

- Advertisement -

Related news

error: Content is protected !!