Thursday, June 4, 2026
spot_imgspot_img
spot_imgspot_img

ಮಂಗಳೂರು ನೂತನ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

- Advertisement -
- Advertisement -

ಕೋಮು ಸೂಕ್ಷ್ಮವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಮೇ 29 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ.

ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.ಸುಧೀರ್ ಕುಮಾರ್ ರೆಡ್ಡಿ ಇದುವರೆಗೂ ಬೇಹುಗಾರಿಕಾ ಇಲಾಖೆಯ ಡಿ ಐ ಜಿ ಆಗಿದ್ದರು. ಅವರು ವರ್ಗಾವಣೆಯಾಗಿರುವ ಅನುಪಮ್ ಅಗ್ರವಾಲ್ ಅವರ ಸ್ಥಾನಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಆಗಿ ನೇಮಕಗೊಂಡಿದ್ದಾರೆ.

ಉಡುಪಿ ಎಸ್ಪಿಯಾದ್ದ ಡಾ.ಅರುಣ್‌ ಕೆ. ಅವರು ವರ್ಗಾವಣೆಯಾಗಿರುವ ಯತೀಶ್ ಎನ್. ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್. ಪಿ ಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅನುಪಮ್ ಅರ್ಗವಾಲ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ.

- Advertisement -

Related news

error: Content is protected !!