- Advertisement -
- Advertisement -






ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಬಂಟ್ವಾಳದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಮನೆಗೆ ಇಂದು ಸಂಜೆ ಭೇಟಿ ಮಾಡಿ ಮಗನನ್ನು ಕಳೆದುಕೊಂಡಿರುವ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡು ನೊಂದವರಿಗೆ ಧೈರ್ಯ ತುಂಬಿದ್ದಾರೆ. ಅಲ್ಲದೆ ದಾಳಿ ವೇಳೆ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಲಂದರ್ ಶಾಫಿಯನ್ನು ಕೂಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಆ ಮೂಲಕ ಕಾಂಗ್ರೆಸ್ನ ಅಲ್ಪಸಂಖ್ಯಾತರ ಆಕ್ರೋಶ ತಣಿಸುವ ಪ್ರಯತ್ನ ಮಾಡಿದ್ದಾರೆ.
- Advertisement -








