Sunday, June 29, 2025
spot_imgspot_img
spot_imgspot_img

ವಿಟ್ಲ: ಮಂಗಲಪದವು ಜಂಕ್ಷನ್‌ನಲ್ಲಿ ಅಕ್ರಮ ಕೂಟ ಕಟ್ಟಿ ಕೊಂಡು ಬಾಕ್ಸೈಟ್‌ ಲಾರಿ ತಡೆದ ಆರೋಪ, ಆರೋಪಿಗಳ ವಿರುದ್ಧ ಸುಮೊಟೋ ಪ್ರಕರಣ ದಾಖಲು..!

- Advertisement -
- Advertisement -

ದಿನಾಂಕ 02-06-2025 ರಂದು ರಾತ್ರಿ ವೇಳೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಂಗಳಪದವು ಎಂಬಲ್ಲಿ ಕೆಲವು ಜನರು ಉದ್ದೇಶಪೂರ್ವಕವಾಗಿ ಅಕ್ರಮ ಕೂಟ ಸೇರಿಕೊಂಡು ವಿಟ್ಲ-ಕಲ್ಲಡ್ಕ ರಸ್ತೆಯಲ್ಲಿ ಹೋಗುವ ಲಾರಿಗಳನ್ನು ತಡೆದು ನಿಲ್ಲಿಸಿರುತ್ತಾರೆ ಎಂಬುದಾಗಿ ಮಾಹಿತಿ ಬಂದ ಮೇರೆಗೆ, ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿರುತ್ತಾರೆ.

ಈ ವೇಳೆ ರಸ್ತೆಯಲ್ಲಿ ಸಂಭವಿಸಿರುವ ಅಫಘಾತ ಪ್ರಕರಣಗಳನ್ನು ನೆಪವಾಗಿಟ್ಟುಕೊಂಡು ಆರೋಪಿಗಳಾದ 1) ರಿಯಾಝ್‌, 2) ಸಮದ್‌, 3) ಕುಂಞಿಮೋನು, 4) ರಹಿಮಾನ್‌ 5) ಸಲೈಮಾನ್‌ ಮತ್ತು ಇತರ 25 ರಿಂದ 30 ಜನರು ರಸ್ತೆಯಲ್ಲಿ ಘನ ವಾಹನಗಳು ಸಂಚರಿಸದಂತೆ ತಡೆಯೊಡ್ಡಿರುವುದು ಹಾಗೂ ಈ ರಸ್ತೆಯಲ್ಲಿ ಯಾವುದೇ ಘನ ಲಾರಿಗಳನ್ನು ಸಂಚರಿಸಲು ಬಿಡುವುದಿಲ್ಲ ಎಂಬುದಾಗಿ ಜೋರಾಗಿ ಬೊಬ್ಬೆ ಹಾಕಿರುವುದಾಗಿದೆ. ಈ ಬಗ್ಗೆ ಆರೋಪಿಗಳ ವಿರುದ್ದ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ: 73/2025 ಕಲಂ: 189(2)(3), 191 (2), 126(2), 190 BNS 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!