- Advertisement -
- Advertisement -








ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಆ.15ರಿಂದ ನಿಷೇಧ ಮಾಡಲಾಗುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆ.15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು. ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು ಎಂದರು
- Advertisement -








