Sunday, June 29, 2025
spot_imgspot_img
spot_imgspot_img

ಅಕ್ರಮ ಗಣಿಗಾರಿಕೆ ಪ್ರಕರಣ; ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು ಮಂಜೂರು

- Advertisement -
- Advertisement -

ಹೈದರಾಬಾದ್:‌ ಅಕ್ರಮ ಗಣಿಗಾರಿಕೆ ಹಗರಣ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ತೆಲಂಗಾಣ ಹೈಕೋರ್ಟ್‌ ತಡೆ ನೀಡಿದೆ.

ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿರುವ ಕೋರ್ಟ್‌, ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೇ, ಭಾರತ ಬಿಟ್ಟು ಹೋಗಲು ಅನುಮತಿ ಇರುವುದಿಲ್ಲ. ಗಾಲಿ ಜನಾರ್ದನ ರೆಡ್ಡಿ ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆಯೂ ಆದೇಶಿಸಿದೆ.

ಆಂಧ್ರ-ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡ ಹೀರೆಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ ಬೆಟ್ಟದಲ್ಲಿ ನಡೆದಿದ್ದ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಓಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ಮತ್ತು ಜನಾರ್ದನರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಈ ಕಂಪನಿಗೆ ಗಣಿ‌ಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ ಹಾಗೂ ಗಣಿ‌ ಇಲಾಖೆಯಿಂದಲೂ ಅಕ್ರಮ‌ ನಡೆದಿತ್ತು. ಇದರಲ್ಲಿ ರಾಜ್ಯದ 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಪ್ರಕರಣದಲ್ಲಿ ಶ್ರೀನಿವಾಸರೆಡ್ಡಿ, ಜನಾರ್ದನ ರೆಡ್ಡಿ, ಆಪ್ತ ಅಲಿಖಾನ್, ಗಣಿ ಇಲಾಖೆಯ ನಿರ್ದೇಶಕ ರಾಜಗೋಪಾಲ್, ಆಂಧ್ರದ ಮಾಜಿ ಸಚಿವೆ ಸಬಿತಾ ಇಂದ್ರಾರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಕೃಪಾನಂದ, ಶ್ರೀಲಕ್ಷ್ಮೀ ಇದ್ದಾರೆ.

2009ರಲ್ಲಿ ಆಂಧ್ರದ ಅಂದಿನ ಮುಖ್ಯಮಂತ್ರಿ ಕಾಂಗ್ರೆಸ್‌ನ ರೋಷಯ್ಯ ಅವರು 2009 ರಲ್ಲಿ ಈ ಪ್ರಕರಣವನ್ನು‌ ಸಿಬಿಐ ತನಿಖೆಗೆ ನೀಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರ ಸೆಪ್ಟೆಂಬರ್ 5 ರಂದು ಜನಾರ್ದನ ರೆಡ್ಡಿ, ಶ್ರೀನಿವಾಸರೆಡ್ಡಿ ಸಿಬಿಐನಿಂದ ಬಂಧಿತರಾಗಿ, ಮೂರುವರೆ ವರ್ಷಗಳ ಕಾಲ ಚಂಚಲಗುಡ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ವಾಸ ಅನುಭವಿಸಿದ್ದರು. ಪ್ರಕರಣದಲ್ಲಿ ಟಪಾಲ್ ಗಣೇಶ ಮತ್ತವರ ಸಹೋದರ ಏಕಾಂಬರಂ, ಪ್ರಮುಖ ಸಾಕ್ಷಿಯಾಗಿದ್ದು, ಈಗಾಗಲೇ ಸಿಬಿಐ 3400 ಕ್ಕೂ ಹೆಚ್ಚು ದಾಖಲೆಗಳ‌ ಪರಿಶೀಲನೆ ಹಾಗೂ 219ಕ್ಕೂ ಹೆಚ್ವು ಸಾಕ್ಷಿಗಳ ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಎಲ್ಲಾ ಆರೋಪಿಗಳು ಜೈಲಿಗೆ ಹೋಗೇ ಹೋಗ್ತಾರೆ ಎಂದು ಟಪಾಲ್ ಗಣೇಶ್ ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಹಿಂದೆ ಜನಾರ್ದನ ರೆಡ್ಡಿ ಹಾಗೂ ಅವರ ಪಟಾಲಂನಿಂದ ಅನುಭವಿಸಿದ್ದ ಕಿರುಕುಳದ ಬಗ್ಗೆಯೂ ಇಂಚಿಂಚಾಗಿ ತೆರೆದಿಟ್ಟಿದ್ದರು.

- Advertisement -

Related news

error: Content is protected !!