ವಿಟ್ಲ ಪಿ ಎಸ್ ಐ ಕೌಶಿಕ್ ಬಿ.ಸಿ. ಸಸ್ಪೆಂಡ್..!; ಜಮಾಲನ ಕಮಾಲ್…?






ವಿಟ್ಲ: ಅಕ್ರಮ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ ನಡೆಸಿದ್ದು ಈ ಬಗ್ಗೆ ಕಾನೂನಾತ್ಮಕ ಕ್ರಮ ಜರುಗಿಸದೇ ಹಣದ ಬೇಡಿಕೆವೊಡ್ಡಿದ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪಿ ಎಸ್ ಐ ಕೌಶಿಕ್ ಬಿ.ಸಿ.ರವರನ್ನು ಅಮಾನತುಗೊಳಿಸಲಾಗಿದೆ.
ಮೇ. 8 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಸ್ಥಳಕ್ಕೆ ಕೌಶಿಕ್ ಬಿ ಸಿ, ಪಿ ಎಸ್ ಐ, ವಿಟ್ಲ ಪೊಲೀಸ್ ಠಾಣೆರವರು ದಾಳಿ ಮಾಡಿರುತ್ತಾರೆ. ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗದಿದ್ದು, ಸ್ಥಳದಲ್ಲಿ ಮೋಟಾರು ಸೈಕಲ್ ಕಂಡುಬಂದಿರುತ್ತದೆ.
ಪಿಎಸ್ಐ ಕೌಶಿಕ್ ಬಿ ಸಿ ರವರು ಈ ಬಗ್ಗೆ ಕಾನೂನಾತ್ಮಕ ಕ್ರಮ ಜರುಗಿಸದೇ ಸ್ಥಳದಲ್ಲಿದ್ದ ಬೈಕ್ ಮಾಲಕನಿಗೆ ಕರೆಮಾಡಿ ಠಾಣೆಗೆ ಬರಮಾಡಿಕೊಂಡಿರುತ್ತಾರೆ. ಬಳಿಕ ಬೈಕ್ ಮಾಲಿಕನಿಗೆ ಮೂರನೇ ವ್ಯಕ್ತಿಯ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಬೇಡಿಕೆಯಿಟ್ಟಿರುವ ಸಂಭಾಷಣೆಯು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರವಾಗಿರುತ್ತದೆ. ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಯ ಮೇಲೆ ಮೇ. 12 ರಂದು ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ಮೂರನೇ ವ್ಯಕ್ತಿಯು ಠಾಣೆಯಲ್ಲಿ ಮಧ್ಯವರ್ತಿ ಮಾಡುತ್ತಿರುವ ಈ ಹಿಂದೆ ಪಿರಿಯಾಪಟ್ಟಣ ಮತ್ತು ಉಪ್ಪಿನಂಗಡಿಯಲ್ಲಿ ಹನಿಟ್ರ್ರಾಪ್ ನಡೆಸಿ ಸಿಕ್ಕಿ ಬಿದ್ದಿರುವ ಆರೋಪಿ ವಿಟ್ಲದ ಜಮಾಲ್ ಜೊತೆ ಸಂಭಾಷಣೆ ನಡೆದ ಆಡಿಯೋ ಒಂದು ವೈರಲ್ ಆಗಿತ್ತು.