Saturday, June 28, 2025
spot_imgspot_img
spot_imgspot_img

ವಿಮಾನ ಪತನ: ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ- ಟಾಟಾ ಗ್ರೂಪ್‌ ಘೋಷಣೆ

- Advertisement -
- Advertisement -

ಅಹಮದಾಬಾದ್ ಬಳಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಟಾಟಾ ಗ್ರೂಪ್ 1 ಕೋಟಿ ರೂಪಾಯಿ ಪರಿಹಾರ ನೀಡಲಿದೆ ಎಂದು ಕಂಪನಿಯ ಅಧ್ಯಕ್ಷ ಎನ್ ಚಂದ್ರಶೇಖರನ್ ಘೋಷಿಸಿದ್ದಾರೆ.

ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಟಾಟಾ ಗ್ರೂಪ್ ಭರಿಸಲಿದೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳಲಿದೆ ಎಂದು ಅವರು ಹೇಳಿದರು.ವಿಮಾನ ಪತನಗೊಂಡು ಬಿದ್ದ ಬಿ ಜೆ ಮೆಡಿಕಲ್ಸ್ ಹಾಸ್ಟೆಲ್ ನಿರ್ಮಾಣಕ್ಕೆ ನಾವು ಸಹಾಯ ಮಾಡುತ್ತೇವೆ ಎಂದು ಅವರು ತಿಳಿಸಿದರು. ಈ ಕ್ಷಣದಲ್ಲಿ ನಾವು ಅನುಭವಿಸುತ್ತಿರುವ ದುಃಖವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಮತ್ತು ಗಾಯಗೊಂಡವರ ಜೊತೆ ನಾವಿದ್ದೇವೆ ಎಂದು ಹೇಳಿದರು

- Advertisement -

Related news

error: Content is protected !!