- Advertisement -
- Advertisement -







ವಿಟ್ಲ: ಪುತ್ತೂರಿನಿಂದ ಉಪ್ಪಳ ಕಡೆಗೆ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ಅತಿಯಾದ ವೇಗದಿಂದ ಬೈರಿಕಟ್ಟೆಯ ಕೆಳಗಿನ ಕ್ರಾಸಿನಲ್ಲಿ ಮಾರ್ಗ ಬಿಟ್ಟು ಹೊಂಡಕ್ಕೆ ವಾಲಿನಿಂತ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ ಪಲ್ಟಿಯಾಗದೇ ಯಾವುದೇ ಅಪಾಯ ಸಂಭವಿಸಿಲ್ಲ.
ಬಸ್ನಲ್ಲಿ ಕನ್ಯಾನ, ಮುಗುಳಿ ಬಾಯಾರು, ಉಪ್ಪಳಕ್ಕೆ ಹೋಗುವ ನೂರಾರು ಪ್ರಯಾಣಿಕರಿದ್ದರು. ನಿತ್ಯವೂ ಹೀಗೆ ಬಸ್ ಚಾಲಕರ ಅತಿಯಾದ ವೇಗದಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದು ಭಯಭೀತರಾಗಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಬೇಜವಾಬ್ದಾರಿ ಚಾಲಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
- Advertisement -