Sunday, June 29, 2025
spot_imgspot_img
spot_imgspot_img

ಗುಡ್ಡ ಕುಸಿತ: ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಸಂಪೂರ್ಣ ಬಂದ್..!

- Advertisement -
- Advertisement -

ಚಿಕ್ಕಮಗಳೂರು: ಮಲೆನಾಡು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರ ಒಂದೇ ಸ್ಥಳದಲ್ಲಿ ಪದೇಪದೇ ಗುಡ್ಡ ಕುಸಿಯುತ್ತಿದೆ. ಶೃಂಗೇರಿ-ಮಂಗಳೂರು ಮಾರ್ಗದ ರಸ್ತೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.

ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ನೆಮ್ಮಾರು ಗ್ರಾಮದ ಬಳಿ ಗುಡ್ಡ ಕುಸಿಯುತ್ತಿರುವ ಹಿನ್ನಲೆ, ಶೃಂಗೇರಿ ಟು ಮಂಗಳೂರು ರಸ್ತೆ ಸಂಚಾರ ಬಂದ್ ಆಗಿದೆ. ಹೀಗಾಗಿ ಮಂಗಳೂರಿಗೆ ತೆರಳುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಜೆಸಿಬಿ ಮೂಲಕ ರಸ್ತೆಗೆ ಅಡ್ಡಲಾಗಿ ಬಿದ್ದ ಮಣ್ಣನ್ನು ತೆರವುಗೊಳಿಸಲಾಗುತ್ತಿದ್ದು, ಮಳೆಯು ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಸದ್ಯ ಶೃಂಗೇರಿ ಠಾಣೆಯ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಬದಲಿ ಮಾರ್ಗಗಳು
ಇನ್ನು ಶಿವಮೊಗ್ಗ, ಶೃಂಗೇರಿ, ನೆಮ್ಮಾರು ಮತ್ತು ಎಸ್‌ಕೆ ಬಾರ್ಡರ್ ಮೂಲಕ ಮಂಗಳೂರಿಗೆ ಸಂಪರ್ಕಿಸುವ ರಸ್ತೆ ಸಂಚಾರ ಬಂದ್ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಬಿದರಗೋಡು, ಆಗುಂಬೆ ಮತ್ತು ಉಡುಪಿ ಮಾರ್ಗವಾಗಿ ಮಂಗಳೂರಿಗೆ ಸಂಚರಿಸುವಂತೆ ವಾಹನ ಸವಾರರಿಗೆ ಪೊಲೀಸರು ನಿರ್ದೇಶಿಸಿದ್ದಾರೆ.

- Advertisement -

Related news

error: Content is protected !!