Friday, June 27, 2025
spot_imgspot_img
spot_imgspot_img

ದ.ಕ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರಿಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪರವರಿಂದ ಅಧಿಕೃತ ನಿಯುಕ್ತಿ ಪತ್ರ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾಗಿ ಪುನರಾಯ್ಕೆಯಾದ ಸತೀಶ್ ಕುಂಪಲರವರು ಜೂ.18ರಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪರವರಿಂದ ಅಧಿಕೃತವಾಗಿ ನಿಯುಕ್ತಿ ಪತ್ರವನ್ನು ಪಡೆದುಕೊಂಡರು.

ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ 2025ರ ಜನವರಿ ತಿಂಗಳಿನಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು.

‘ಪಕ್ಷದ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್ ಕುಂಪಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿ ರಾಜೇಶ್ ಕಾವೇರಿ ತಿಳಿಸಿದ್ದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 2021 ಜನವರಿಯಲ್ಲಿ ಸತೀಶ್ ಕುಂಪಲ ಅವರನ್ನು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿದ್ದರು.

ಮುಂದಿನ ದಿನಗಳಲ್ಲಿ ಜಿಲ್ಲೆಯ ಸಂಘಟನಾತ್ಮಕ ಕಾರ್ಯ ಚಟುವಟಿಕೆಗಳಲ್ಲಿ ನಮ್ಮ ಕಾರ್ಯಕರ್ತರೊಂದಿಗೆ ತೊಡಗಿ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ದೃಢವಾಗಿ ಪ್ರತಿಭಟಿಸೋಣ ಎಂದು ಒಂದು ವರೆ ವರ್ಷಗಳ ನಂತರ ನಿಯುಕ್ತಿ ಪತ್ರ ಪಡೆದ ಸತೀಶ್ ಕುಂಪಲ ತಿಳಿಸಿದರು.

- Advertisement -

Related news

error: Content is protected !!