Saturday, June 28, 2025
spot_imgspot_img
spot_imgspot_img

ಪುತ್ತೂರು: ಗೊಂಬೆ ವೇಷ ಧರಿಸಿ ಬಡ ಕುಟುಂಬಗಳಿಗೆ ಆಸರೆಯಾಗುತ್ತಿದ್ದ ಯುವಕ ಅನಾರೋಗ್ಯದಿಂದ ನಿಧನ..!

- Advertisement -
- Advertisement -

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಬನ್ನೂರು ನಿವಾಸಿ ಅಣ್ಣಪ್ಪ (29) ಎಂದು ಗುರುತಿಸಲಾಗಿದೆ.

ಅವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಣ್ಣಪ್ಪರವರು ಮೊದಲು ಪುತ್ತೂರಿನ ಸೇವಾ ಸಂಸ್ಥೆ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಮೂಲಕ ವಿಶೇಷ ವೇಷ ಧರಿಸಿ ಹಲವಾರು ಬಡ ಕುಟುಂಬದ ಮಕ್ಕಳಿಗೆ ಮತ್ತು ಆರೋಗ್ಯದ ಸಮಸ್ಯೆ ಇರುವಂತಹ ವ್ಯಕ್ತಿಗಳಿಗೆ ತನ್ನ ಕೈಯಿಂದ ಆದಷ್ಟು ಜಾತ್ರೆ ಅಥವಾ ಇನ್ನಿತರ ಕಾರ್ಯಕ್ರಗಳಲ್ಲಿ ವಿವಿಧ ರೀತಿಯ ವೇಷ ಹಾಕಿ ಅದರಲ್ಲಿ ಬಂದಂತಹ ಹಣವನ್ನು ಬಡವರಿಗೆ ಸಹಾಯ ಮಾಡುತ್ತಿದ್ದರು. ಅಲ್ಲದೆ ತನ್ನದೇ ಆದ ಕಲಾಸಿರಿ ಗೊಂಬೆ ಬಳಗ (ರಿ) ಪುತ್ತೂರು ಇದನ್ನು ಪ್ರಾರಂಭಿಸಿ ವರ್ಷದಲ್ಲಿ ಒಂದು ದಿನ ಗೊಂಬೆ ವೇಷ ಧರಿಸಿ ಅದರಲ್ಲಿ ಬಂದಂತಹ ಹಣವನ್ನು ಬಡಕುಟುಂಬಗಳಿಗೆ ಹಾಗೂ ಅನಾರೋಗ್ಯ ಪೀಡಿತ ಕುಟುಂಬಗಳಿಗೆ ಧನಸಹಾಯದ ಮೂಲಕ ತನ್ನಿಂದ ಆದಷ್ಟು ಸಹಾಯ ಮಾಡುತ್ತಿದ್ದರು. ಮೃತರು ಬನ್ನೂರಿನ ಬಾಡಿಗೆ ಮನೆಯಲ್ಲಿ ಅಕ್ಕ ನೊಂದಿಗೆ ವಾಸವಿದ್ದರು.

- Advertisement -

Related news

error: Content is protected !!