Sunday, June 29, 2025
spot_imgspot_img
spot_imgspot_img

ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಬಗ್ಗೆ ನನಗೆ ಮಾಹಿತಿ ಗೊತ್ತಿದೆ, ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ಧ:

- Advertisement -
- Advertisement -

ವ್ಯಕ್ತಿಯೊಬ್ಬರು ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌‌

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬ ತನಗೆ ಮಾಹಿತಿ ಇರುವುದಾಗಿ ಬರೆದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡುಬಂದಿರುತ್ತದೆ.

ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ, ಬರೆದ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಿದಾಗ, ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ದವಿರುವುದಾಗಿ ತಿಳಿಸಿರುತ್ತಾರೆ.

ಆ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ, ಆ ಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ. ಅದರಂತೆ ಆ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!