Saturday, July 5, 2025
spot_imgspot_img
spot_imgspot_img

ವೀರಕಂಭ ಶಕ್ತಿ ಕೇಂದ್ರದ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ವೀರಕಂಭ ಪಂಚಾಯತ್ ಮುಂಭಾಗ ಬೃಹತ್ ಪ್ರತಿಭಟನೆ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ದುರಾಡಳಿತ, ಬೆಲೆ ಏರಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ‘ವೀರಕಂಭ ಶಕ್ತಿ ಕೇಂದ್ರದ ನೇತೃತ್ವದಲ್ಲಿ’ ವೀರಕಂಭ ಪಂಚಾಯತ್ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಕ್ತಿ ಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿ ವಹಿಸಿದ್ದರು. ಜಿಲ್ಲಾ OBC ಮೊರ್ಚಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಪ್ರಧಾನ ಭಾಷಣ ಮಾಡಿದರು.ಬೂತ್ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಜಿಲ್ಲಾ ಮುಖಂಡರು ಮಂಡಲ ಮೋರ್ಚಾ ಪದಾಧಿಕಾರಿಗಳು, ಪಂಚಾಯತ್ ಸದಸ್ಯರು,ವೀರಕಂಭ ಗ್ರಾಮದ ಪಕ್ಷ ಪ್ರಮುಖರು, ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಮತ್ತು ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಮೂಲಕ ರಾಜ್ಯ ರಾಜ್ಯಪಾಲಾರಿಗೆ ಮನವಿ ಸಲ್ಲಿಸಲಾಯಿತು.ಶಕ್ತಿ ಕೇಂದ್ರ ಪ್ರಮುಖ್ ಸ್ವಾಗತಿಸಿ ಬೂತ್ ಅಧ್ಯಕ್ಷರು ವಂದಿಸಿದರು.

- Advertisement -

Related news

error: Content is protected !!