- Advertisement -
- Advertisement -



ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಅವ್ಯವಸ್ಥೆ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ ಬೆನ್ನಲ್ಲೇ ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಾಲಿಕೆಯ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದ ಅವರು ಬಳಿಕ ನಗರಪಾಲಿಕೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಗರದಲ್ಲಿ ಚಾಲನೆಯಲ್ಲಿರುವ ವಿವಿದ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದ ಅವರು, ಪ್ರವಾಹ ನಿಯಂತ್ರಣಕ್ಕೆ ನಡೆದಿರುವ ಕಾಮಗಾರಿಗಳ ಕುರಿತು ಚರ್ಚಿಸಿದರು. ನಂತರ, ಸ್ಮಾರ್ಟ್ ಸಿಟಿ ಕಚೇರಿಗೆ ಭೇಟಿ ಕೊಟ್ಟು ಇದುವರೆಗೆ ನಡೆದಿರುವ ಯೋಜನೆಗಳ ಮಾಹಿತಿ ಪಡೆದರು.
- Advertisement -