- Advertisement -
- Advertisement -
ಬಂಟ್ವಾಳ: ಚಿಕ್ಕಮಂಗಳೂರು ಜಿಲ್ಲೆಯ ಪವಿತ್ರ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರು ದತ್ತಾತ್ರೇಯ ಪೀಠದಲ್ಲಿ ಹಿಂದೂ ಅರ್ಚಕರ ನಿಯುಕ್ತಿ ಹಾಗೂ ತ್ರಿಕಾಲ ಪೂಜ ವ್ಯವಸ್ಥೆಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಬಂಟ್ವಾಳ ತಾಲೂಕು ಘಟಕ ಬಂಟ್ವಾಳ ತಹಶಿಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ನೀಡಿದರು.
ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಗೋರಕ್ಷ ಪ್ರಮುಖ್ ಅಶೋಕ್ ಶೆಟ್ಟಿ ಸರಪಾಡಿ, ಪುತ್ತೂರು ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ, ಭಜರಂಗದಳ ಬಂಟ್ವಾಳ ಸಹ ಸಂಚಾಲಕ ಸಂತೋಷ್ ಕುಮಾರ್, ದೀಪಕ್ ಬಂಟ್ವಾಳ, ಬಂಟ್ವಾಳ ಪ್ರಖಂಡ ಸೇವಾ ಪ್ರಮುಖ್ ಪ್ರಸಾದ್ ಬೆಂಜನಪದವು, ಬಂಟ್ವಾಳ ಪ್ರಖಂಡದ ಸಂಚಾಲಕ ಶಿವಪ್ರಸಾದ್ ತುಂಬೆ, ಧರ್ಮಪ್ರಸಾರಣ್ ಪ್ರಮುಖ್ ರಾಜಾರಾಮ್ ನಾಯಕ್, ರತೀಶ್ ರಾಮಲ್ ಕಟ್ಟೆ , ವಿನೀತ್ ಬಂಟ್ವಾಳ, ರೋಹಿತ್ ಮತ್ತಿತರರು ಉಪಸ್ಥಿತರಿದ್ದರು.
- Advertisement -