- Advertisement -
- Advertisement -



ಗಾಂಧೀನಗರ: ಅಹಮದಾಬಾದ್ನಲ್ಲಿ ಶುಕ್ರವಾರ ನಡೆದ 148ನೇ ಜಗನ್ನಾಥ ರಥಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಗಳು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ ಪರಿಣಾಮ ಇಬ್ಬರು ಭಕ್ತರು ಗಾಯಗೊಂಡ ಘಟನೆ ನಡೆದಿದೆ.
ಶುಕ್ರವಾರ ಬೆಳಗ್ಗೆ 10:15 ರ ಸುಮಾರಿಗೆ ರಥಯಾತ್ರೆ ನಗರದ ಖಾದಿಯಾ ಪ್ರದೇಶದ ಮೂಲಕ ಹಾದುಹೋಗುತ್ತಿತ್ತು. ಈ ವೇಳೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಯೊಂದು ಇದ್ದಕ್ಕಿದ್ದಂತೆ ಗುಂಪಿನಿಂದ ದೂರ ಸರಿದು ವಿರುದ್ಧ ದಿಕ್ಕಿನಲ್ಲಿ ಓಡಲು ಪ್ರಾರಂಭಿಸಿತು. ಕಿರಿದಾದ ಬೀದಿಯಾದ್ದರಿಂದ ಜನರು ಬೆಚ್ಚಿಬಿದ್ದರು. ಇದರೊಂದಿಗೆ ಇನ್ನೆರಡು ಆನೆಗಳು ಸಹ ಓಡಿದ್ದು, ಬಳಿಕ ಮಾವತರು ಆನೆಗಳನ್ನು ನಿಯಂತ್ರಿಸಿದ್ದಾರೆ. ಆನೆಗಳನ್ನು ಕರೆದೊಯ್ದ ಬಳಿಕ ಮೆರವಣಿಗೆ ಮುಂದುವರೆಸಲಾಯಿತು.
ಈ ಅವಘಡದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಗಾಯಗೊಂಡ ಭಕ್ತನನ್ನು ಚಿಕಿತ್ಸೆಗಾಗಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
- Advertisement -