- Advertisement -
- Advertisement -



ಜೀವಂದರ್ ಜೈನ್ (60)ಪುತ್ತೂರು ಎಂಬವರು ದಿನಾಂಕ 29-06-2025 ರಂದು ಸಂಜೆ ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ ಅನ್ನು ನೋಡುತ್ತಿದ್ದಾಗ, “ಕರುನಾಡಿನ ಮಿನುಗುವ ನಕ್ಷತ್ರ” ಎಂಬ ಪೇಸ್ ಬುಕ್ ಪೇಜ್ ಹೊಂದಿರುವ ವ್ಯಕ್ತಿಯು, ಪೇಸ್ ಬುಕ್ ನಲ್ಲಿ ಪೋಸ್ಟ್ ಒಂದಕ್ಕೆ ಕಮೆಂಟ್ ಮಾಡುವ ವೇಳೆ, ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳ ಗೌರವಕ್ಕೆ ದಕ್ಕೆ ಉಂಟು ಮಾಡುವ ರೀತಿಯಲ್ಲಿ ಹಾಗೂ ಸಾರ್ವಜನಿಕ ಶಾಂತಿ ನೆಮ್ಮಧಿಗೆ ದಕ್ಕೆಯನ್ನುಂಟು ಮಾಡುವ ರೀತಿಯಲ್ಲಿ ಕಮೆಂಟ್ ಮಾಡಿರುವುದು ಕಂಡುಬಂದಿರುತ್ತದೆ.
ಈ ಬಗ್ಗೆ ಜೀವಂದರ್ ಜೈನ್ ರವರ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ 50/2025 ಕಲಂ- 196(1)(a),353(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ, ಮುಂದಿನ ಕಾನೂನುಕ್ರಮದ ಬಗ್ಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
- Advertisement -