Saturday, July 5, 2025
spot_imgspot_img
spot_imgspot_img

ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀ ಕೃಷ್ಣ ಜೆ ರಾವ್ ಬಂಧನ..!

- Advertisement -
- Advertisement -

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿ ಇದೀಗ ಯುವಕ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್‌ ರಾವ್ ಎಂಬವರ ಪುತ್ರ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದ. ಮಂಗಳೂರಿನ ಎಸ್ಪಿ ಅವರು ತನಿಖೆಯನ್ನು ಚುರುಕು ಗೊಳಿಸಿದ್ದು, ಈಗ ಪೊಲೀಸರ ಶೀಘ್ರ ಕಾರ್ಯಚರಣೆಯಲ್ಲಿ ಆರೋಪಿ ಶ್ರೀಕೃಷ್ಣ ಜೆ.ರಾವ್‌ನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರಿನಿಂದ ತೆರಳಿರುವ ಪೊಲೀಸರ ತಂಡವೊಂದು ಮೈಸೂರು ಸಮೀಪ ಆರೋಪಿ ಇರುವುದನ್ನು ಪತ್ತೆ ಮಾಡಿ ಅಲ್ಲಿಂದ ವಶಕ್ಕೆ ಪಡೆದುಕೊಂಡು ಆಗಮಿಸುತ್ತಿರುವುದಾಗಿ ಮಾಹಿತಿ ಲಭಿಸಿದೆ. ಮತ್ತೊಂದೆಡೆ ಉಡುಪಿ ಸಮೀಪದಿಂದ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

- Advertisement -

Related news

error: Content is protected !!