Tuesday, June 16, 2026
spot_imgspot_img
spot_imgspot_img

ಸಾಲೆತ್ತೂರು: ಸರ್ಕಾರಿ ಜಮೀನಿನಲ್ಲಿ ಅಕ್ರಮ ಶೆಡ್‌ ನಿರ್ಮಾಣ; ಹೋಲೋ ಬ್ಲಾಕ್ ಕಂಪನಿ ಮೇಲೆ ಕಂದಾಯ, ಮೆಸ್ಕಾಂ ಮತ್ತು ಗ್ರಾ.ಪಂ ಅಧಿಕಾರಿಗಳು ದಿಢೀರ್ ದಾಳಿ..!

- Advertisement -
- Advertisement -

ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಸಾಲೆತ್ತೂರು ಬಳಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ರಾಜಾರೋಷವಾಗಿ ನಡೆಯುತ್ತಿದ್ದ ಹೋಲೋ ಬ್ಲಾಕ್ ಕಂಪನಿ ಮೇಲೆ ಕಂದಾಯ, ಮೆಸ್ಕಾಂ ಮತ್ತು ಗ್ರಾಮ ಪಂಚಾಯಿತ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಮಂಗಳೂರು ಸಹಾಯಕ ಆಯುಕ್ತರ ನಿರ್ದೇಶನದ ಮೇಲೆ ದಾಳಿ ನಡೆದಿದೆ.ಕಳೆದ ಎಂಟು ವರ್ಷಗಳಿಂದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಸಾಲೆತ್ತೂರು ಅಗರಿ ಎಂಬಲ್ಲಿನ 512/6 ರ ಸರ್ಕಾರಿ ಜಮೀನಿನಲ್ಲಿ ಕರಾಯಿ ಅಬ್ದುಲ್ ಕರೀಂ ಎಂಬವರು ಅಕ್ರಮವಾಗಿ ಶೆಡ್ ನಿರ್ಮಿಸಿ ಹೋಲೋ ಬ್ಲಾಕ್ ಕಂಪನಿ ನಡೆಸಿದ್ದಾರೆ. ಜಮೀನಿಗೆ ಯಾವುದೇ ದಾಖಲೆಗಳಿಲ್ಲದಿದ್ದರೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ತಾತ್ಕಾಲಿಕ ನೆಲೆಯಲ್ಲಿ ವಿದ್ಯುತ್ ನೀಡಿದ್ದಾರೆ. ಈ ಬಗ್ಗೆ ಕರಾಯಿ ಖಾಲಿದ್ ಎಂಬವರು ನೀಡಿದ ದೂರಿನನ್ವಯ ಅಧಿಕಾರಿಗಳ ತಂಡ ದಾಳಿ ನಡೆದಿದೆ.

ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ರವಿ.ಎಂ.ಎನ್, ಕೊಳ್ನಾಡು ಗ್ರಾಮ ಆಡಳಿತಾಧಿಕಾರಿ ಕರಿ ಬಸಪ್ಪ, ಪಿ.ಡಿ.ಒ.ಲಾವಣ್ಯ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!