- Advertisement -
- Advertisement -



ಕಾಸರಗೋಡು: ನೆಲ್ಲಿಕಟ್ಟೆ ಸಮೀಪದ ಪೈಕ ಎಂಬಲ್ಲಿ ಮಸೀದಿಯ ಆವರಣದ ಒಳಗೆ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಗುರುವಾರ ಮುಂಜಾನೆ ವರದಿಯಾಗಿದೆ.
ಬೆಂಕಿಯಿಂದ ಕಾರು ಸಂಪೂರ್ಣ ಉರಿದಿದೆ. ಕಾಸರಗೋಡಿನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ಪಾಸ್ ಫೋರ್ಟ್ ಸೇರಿದಂತೆ ಇತರ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಸಮೀಪದಲ್ಲೇ ಇದ್ದ ಶಾಲಾ ಬಸ್ ಮತ್ತು ಸ್ಕೂಟರ್ ಗೂ ಹಾನಿ ಉಂಟಾಗಿದೆ ಎಂದು ತಿಳಿದು ಬಂದಿದೆ.
- Advertisement -








