Saturday, September 5, 2026
spot_imgspot_img
spot_imgspot_img

ಪಿಕಪ್‌ಗೆ ಎಲ್‌ಪಿಜಿ ಟ್ಯಾಂಕರ್‌ ಡಿಕ್ಕಿ, ಸ್ಫೋಟ: ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

- Advertisement -
- Advertisement -

ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ಮಂಡಿಯಾಲ ಗ್ರಾಮದಲ್ಲಿ ಭಾನುವಾರ ಎಲ್‌ಪಿಜಿ ಟ್ಯಾಂಕರ್ ಸ್ಫೋಟ ನಡೆದಿದ್ದು, ಈಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದ್ದು, ನಾಲ್ವರು ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಶುಕ್ರವಾರ ರಾತ್ರಿ ಪಿಕಪ್ ಟ್ರಕ್ ಎಲ್‌ಪಿಜಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ 30 ಅಂಗಡಿಗಳು ಮತ್ತು 20 ಮನೆಗಳು ಸುಟ್ಟು ಭಸ್ಮವಾಗಿವೆ.ಘಟನೆಯಲ್ಲಿ 21 ಜನರು ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಏಳು ಜನರನ್ನು ಹೋಶಿಯಾರ್‌ಪುರದ ಸಿವಿಲ್ ಆಸ್ಪತ್ರೆಗೆ ಮತ್ತು ಎಂಟು ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಇತರರನ್ನು ಹೋಶಿಯಾರ್‌ಪುರ ಮತ್ತು ಆದಂಪುರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.ಘಟನೆ ಸಂಬಂಧ ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರ ಮೃತರ ಕುಟುಂಬಗಳಿಗೆ ಎರಡು ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ಎಲ್ಲಾ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಘಟನೆಯ ಬಗ್ಗೆ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರು ದುಃಖ ವ್ಯಕ್ತಪಡಿಸಿದ್ದಾರೆ. “ಅಮಾಯಕರ ಜೀವಗಳನ್ನು ಬಲಿ ತೆಗೆದುಕೊಂಡ ಮತ್ತು ಅನೇಕರಿಗೆ ಗಾಯಗಳನ್ನುಂಟು ಮಾಡಿದ ದುರಂತದ ಬಗ್ಗೆ ತಿಳಿದು ನನಗೆ ತೀವ್ರ ನೋವಾಗಿದೆ. ಈ ಭೀಕರ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ಅಪಾರ ದುಃಖದ ಸಮಯದಲ್ಲಿ ದುಃಖಿತ ಕುಟುಂಬಗಳಿಗೆ ಶಕ್ತಿ ಮತ್ತು ಸಾಂತ್ವನವನ್ನು ನಾನು ಪ್ರಾರ್ಥಿಸುತ್ತೇನೆ” ಎಂದು ರಾಜ್ಯಪಾಲರು ಸಂದೇಶದಲ್ಲಿ ತಿಳಿಸಿದ್ದಾರೆ.ಗಾಯಗೊಂಡ ಎಲ್ಲರಿಗೂ ರಾಜ್ಯಪಾಲರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು ಮತ್ತು ಪರಿಸ್ಥಿತಿಯನ್ನು ನಿರ್ವಹಿಸಲು ಮತ್ತು ಬಲಿಪಶುಗಳಿಗೆ ತುರ್ತು ವೈದ್ಯಕೀಯ ನೆರವು ನೀಡಲು ತಕ್ಷಣವೇ ಕಾರ್ಯನಿರ್ವಹಿಸಿದ ಜಿಲ್ಲಾಡಳಿತ, ಪಂಜಾಬ್ ಪೊಲೀಸರು ಮತ್ತು ವೈದ್ಯಕೀಯ ತಂಡಗಳ ತ್ವರಿತ ಪ್ರತಿಕ್ರಿಯೆಯನ್ನು ಶ್ಲಾಘಿಸಿದರು.

- Advertisement -

Related news

error: Content is protected !!