- Advertisement -
- Advertisement -



ಬೆಳ್ತಂಗಡಿ: ಚಾರ್ಮಾಡಿ ಘಾಟ್ನಲ್ಲಿ ಮೂರು ವಾಹನಗಳ ನಡುವೆ ಅಪಘಾತ ನಡೆದಿದ್ದು ಹಲವಾರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ನ ಎರಡನೇ ತಿರುವಿನಲ್ಲಿ ಸೆ.7 ರಂದು ಬೆಳಗ್ಗೆ, 9 ಗಂಟೆಗೆ ಉಜಿರೆಯಿಂದ ಮೂಡಿಗೆರೆ ಕಡೆ ಪ್ರಯಾಣ ಮಾಡುತ್ತಿದ್ದ ಸರಕಾರಿ ಬಸ್ಗೆ ಮೂಡಿಗೆರೆಯಿಂದ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಡಿಕ್ಕಿ ಹೊಡೆದಿದ್ದು ಬಳಿಕ ಲಾರಿಗೆ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಹಲವು ಮಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ರಸ್ತೆ ಸಂಚಾರಕ್ಕೆ ಅಡಚಣೆಯಾಗಿದ್ದು ಸಾರ್ವಜನಿಕರು ಸುಗಮ ಸಂಚಾರಕ್ಕೆ ಸಹಕರಿಸುತ್ತಿದ್ದಾರೆ.
- Advertisement -








