Sunday, June 7, 2026
spot_imgspot_img
spot_imgspot_img

ಉಡುಪಿ: ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರ ಸಾವು

- Advertisement -
- Advertisement -

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದ್ದು, ಗುರುವಾರ ಮೃತದೇಹ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಸಾಸ್ತಾನ ಕೋಡಿತಲೆ ನಿವಾಸಿ ರಾಮ ಖಾರ್ವಿ ಎಂದು ಗುರುತಿಸಲಾಗಿದೆ. ಅವರ ಮೃತದೇಹ ಮಲ್ಪೆ ಲೈಟ್ ಹೌಸ್ ಬಳಿ ಗುರುವಾರ ದೊರಕಿದೆ.

ರಾಮ ಖಾರ್ವಿ ಅವರು ಕಳೆದ 25-30 ವರ್ಷಗಳಿಂದ ತಮ್ಮ ದೋಣಿಯಲ್ಲಿ ಒಬ್ಬರೇ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳುತಿದ್ದರು.

ಎಂದಿನಂತೆ ಸೆ.10ರಂದು ಕೂಡ ಮೀನುಗಾರಿಕೆಗೆ ತೆರಳಿದ್ದ ಇವರು ಮದ್ಯಾಹ್ನವಾದರೂ ಮನೆಗೆ ಬಂದಿರಲಿಲ್ಲ. ರಾಮ ಖಾರ್ವಿ ಅವರ ಮಗ ಅವರನ್ನು ಮೊಬೈಲ್ ಮೂಲಕ ಸಂಪರ್ಕ ಮಾಡಲು ಎಷ್ಟೇ ಪ್ರಯತ್ನಿಸಿದರೂ, ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಹಾಗಾಗಿ ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಮಲ್ಪೆಗೆ ತೆರಳಿ ರಾತ್ರಿವರೆಗೆ ಹುಡುಕಾಟ ನಡೆಸಿದರೂ ಯಾವುದೇ ಕುರುಹು ಸಿಕ್ಕಿರಲಿಲ್ಲ.

ಮಾರನೇ ದಿನ, ಮಲ್ಪೆ ಲೈಟ್ ಹೌಸ್ ಬಳಿ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು, ರಾಮ ಖಾರ್ವಿ ಅವರು ಈಜಲು ಆಗದೆ ನೀರಲ್ಲಿ ಮುಳುಗಿ ಮೃತಪಟ್ಟಿರುವ ಮಾಹಿತಿ ಲಭಿಸಿದೆ.

- Advertisement -

Related news

error: Content is protected !!