Thursday, August 6, 2026
spot_imgspot_img
spot_imgspot_img

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯ ಬಂಧನ..!

- Advertisement -
- Advertisement -

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ಮೂಲದ ಅಬ್ದುಲ್ ಹನೀಫ್ ಬಂಧಿತ ಆರೋಪಿ.

ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಕ್ರ: 135/2016 ಕಲಂ 323 324,354& 149 ಐಪಿಸಿ ಪ್ರಕರಣದಲ್ಲಿ, ಮಾನ್ಯ 6ನೇ ಜೆಎಂಎಫ್ ಸಿ ನ್ಯಾಯಾಲಯ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಸಿ ಸಿ ನಂಬರ್ 1059/2018 ರಂತೆ ವಿಚಾರಣೆಯಲ್ಲಿರುವ ಪ್ರಕರಣದಲ್ಲಿ ನ್ಯಾಯಾಲಯವು ಕಳೆದ ಒಂದು ವರ್ಷದಿಂದ ಆರೋಪಿತನಿಗೆ 9 ಬಾರಿ ವಾರೆಂಟ್ ಹೊರಡಿಸಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಬಗ್ಗೆ ಕಲಂ 269 ಬಿಎನ್ಎಸ್ 2023 ರಂತೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ವಾರೆಂಟ್ ಸಿಬ್ಬಂದಿಗಳಾದ ಎಎಸ್ಐ ಮಚೇಂದ್ರನಾಥ್ ಜೋಗಿ HC 865 ನೇ ನಾರಪ್ಪ ಕೆಬಿ ರವರು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಈತನಿಗೆ 4 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.

- Advertisement -

Related news

error: Content is protected !!