Friday, August 7, 2026
spot_imgspot_img
spot_imgspot_img

ಕಾಸರಗೋಡು: ವಿಷ ಸೇವಿಸಿ ಯುವ ದಂಪತಿ ಆತ್ಮಹತ್ಯೆ

- Advertisement -
- Advertisement -

ಕಾಸರಗೋಡು: ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಕಡಂಬಾರಿನ ಅಜಿತ್ (35) ಮತ್ತು ಪತ್ನಿ ಶ್ವೇತಾ (27) ಎಂದು ಗುರುತಿಸಲಾಗಿದೆ.

ಅಜಿತ್ ಪೈಂಟಿಂಗ್ ಕಾರ್ಮಿಕರಾಗಿದ್ದು , ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್‌ನ ಖಾಸಗಿ ಶಾಲಾ ಶಿಕ್ಷಕಿಯಾಗಿದ್ದರು. ಸೋಮವಾರ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿ ಇಬ್ಬರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಜಿತ್ ರಾತ್ರಿ ಹಾಗೂ ಶ್ವೇತಾ ಇಂದು ಬೆಳಿಗ್ಗೆ ಮೃತಪಟ್ಟರು.

ಸೋಮವಾರ ಅಜಿತ್ ಮೂರು ವರ್ಷದ ತನ್ನ ಮಗ ಸಹಿತ ಬಂದ್ಯೋಡಿನಲ್ಲಿರುವ ಸಹೋದರಿ ಮನೆಗೆ ಬಂದಿದ್ದು, ಬೇರೆ ಕಡೆಗೆ ತೆರಳಲಿದ್ದು, ಮಗನನ್ನು ನೋಡಿಕೊಳ್ಳುವಂತೆ ಹೇಳಿ ತೆರಳಿದ್ದರು ಎನ್ನಲಾಗಿದೆ. ಮಗನನ್ನು ಸಹೋದರಿ ಮನೆಯಲ್ಲಿ ಬಿಟ್ಟು ಮರಳಿದ ಅಜಿತ್ ಹಾಗೂ ಪತ್ನಿ ಶ್ವೇತಾ ವಿಷ ಸೇವಿಸಿದ್ದಾರೆ.

ಸಂಜೆ ಮನೆ ವರಾಂಡದಲ್ಲಿ ಬಿದ್ದಿದ್ದ ಇಬ್ಬರನ್ನು ಪರಿಸರವಾಸಿಗಳು ಗಮನಿಸಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರೂ ಮೃತ ಪಟ್ಟಿದ್ದಾರೆ. ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎಂದು ಪೊಲೀಸರ ಪ್ರಾಥಮಿಕ ಮಾಹಿತಿ ತಿಳಿಸಿವೆ. ಮಂಜೇಶ್ವರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!