ಮಂಗಳೂರು: ಭೀಕರ ಅಪಘಾತದಲ್ಲಿ ಯುವಕನೊಬ್ಬ ಕಂಟೇನರ್ ಲಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಮರೋಳಿಯಲ್ಲಿ ನಡೆದಿದೆ.
ಪಡೀಲ್ ಕಡೆಯಿಂದ ನಂತೂರು ಭಾಗಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಯುವಕ ತಿರುವಿನಲ್ಲಿ ನಿಯಂತ್ರಣ ಕಳಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿದ್ದು ರಸ್ತೆಯ ಇನ್ನೊಂದು ಭಾಗಕ್ಕೆ ಪಲ್ಟಿ ಹೊಡೆದು ಬಿದ್ದಿದ್ದಾನೆ. ಇದೇ ವೇಳೆ ನಂತೂರು ಕಡೆಯಿಂದ ಬಿ.ಸಿ ರೋಡಿನತ್ತ ಹೋಗುತ್ತಿದ್ದ ಕಂಟೇನರ್ ಲಾರಿ ರಸ್ತೆಗೆ ಬಿದ್ದ ಯುವಕನ ಮೇಲೆ ಹರಿದಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತ ಯುವಕನನ್ನು ನೀರುಮಾರ್ಗ ನಿವಾಸಿ ಮನ್ವಿತ್ ಎಂದು ಹೇಳಲಾಗುತ್ತಿದೆ. ಕಂಕನಾಡಿ ಸಂಚಾರ ವಿಭಾಗದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು ಯುವಕನನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತದಿಂದ ಬೆದರಿದ ಲಾರಿ ಚಾಲಕ ಕಂಟೇನರ್ ಬಿಟ್ಟು ಪರಾರಿಯಾಗಿದ್ದಾನೆ.
ಬೈಕ್ ಸವಾರನ ಅತಿ ವೇಗದ ಚಾಲನೆಯಿಂದಲೇ ಅಪಘಾತ ಆಗಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ತೆರವುಗೊಳಿಸಿದ್ದಾರೆ.