Thursday, June 18, 2026
spot_imgspot_img
spot_imgspot_img

ಮಂಗಳೂರು: ಅಕ್ರಮ ಜಾನುವಾರು ವಧೆ ಆರೋಪ; ಮೂರು ಶೆಡ್‌ಗಳು ಸೀಜ್

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆಗಳಲ್ಲಿ ಅಕ್ರಮ ಜಾನುವಾರು ವಧೆ ಮಾಡುವ ಶೆಡ್‌ಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಜಿಲ್ಲಾ ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಗಬೆಟ್ಟು ಗ್ರಾಮದ ಕೆರೆಬಳಿ ಎಂಬಲ್ಲಿ ನಾಸಿರ್ ಮತ್ತಿತರರು ಜಾನುವಾರು ವಧೆಗೆ ಬಳಸಿದ ಇದಿನಬ್ಬರ ಮನೆ, ಶೆಡ್ಡನ್ನು ಕಲಂ 8 (1)ರ ಪ್ರಕಾರ ತನಿಖಾಧಿಕಾರಿ ಜಪ್ತಿ ಮಾಡಿ ಮುಟ್ಟುಗೋಲಿಗಾಗಿ ಮಂಗಳೂರು ಉಪವಿಭಾಗದ ದಂಡಾಧಿಕಾರಿಗೆ ವರದಿ ಮಾಡಿದ್ದರು.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಟ್ಟು ಗ್ರಾಮದ ಮುಹಮ್ಮದ್ ರಫೀಕ್‌ರ ಮನೆ ಮತ್ತು ಖಾಲಿ ಜಾಗವನ್ನು ಕಲಂ 8 (1)ರ ಪ್ರಕಾರ ತನಿಖಾಧಿಕಾರಿ ಜಪ್ತಿ ಮಾಡಿ ಮುಟ್ಟುಗೋಲಿಗಾಗಿ ಪುತ್ತೂರು ಉಪವಿಭಾಗದ ದಂಡಾಧಿಕಾರಿಗೆ ವರದಿ ಮಾಡಿದ್ದರು. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯ ವೇಳೆ ಆರೋಪಿ ಮುಹಮ್ಮದ್ ಮನ್ಸೂರ್ ಎಂಬಾತನು ವಧೆ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದ ಮಂಗಳೂರಿನ ಜೆಎಂ ರಸ್ತೆಯ ಭಟ್ಕಳ ಬಜಾರ್ ಬಂದರ್ ಕುದ್ರೋಳಿ ಬಳಿಯಿರುವ ಕಟ್ಟಡವನ್ನು ಕಲಂ 8 (1) ರ ಪ್ರಕಾರ ತನಿಖಾಧಿಕಾರಿ ಜಪ್ತಿ ಮಾಡಿ ಮುಟ್ಟುಗೋಲಿಗಾಗಿ ಮಂಗಳೂರು ಉಪವಿಭಾಗದ ದಂಡಾಧಿಕಾರಿಗೆ ವರದಿ ಸಲ್ಲಿಸಿದ್ದರು.

ಅದರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020ರಡಿ ಕೃತ್ಯಕ್ಕೆ ಬಳಸಿರುವ ಸ್ಥಳ ಮತ್ತು ಕಟ್ಟಡಗಳನ್ನು ಜಪ್ತಿ ಮಾಡಲಾಗಿದೆ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!