Friday, September 11, 2026
spot_imgspot_img
spot_imgspot_img

ಉಡುಪಿ: ಚಿರತೆಗೆ ಬೈಕ್ ಡಿಕ್ಕಿ; ಸವಾರ ಗಂಭೀರ, ಚಿರತೆ ಸಾವು

- Advertisement -
- Advertisement -

ಉಡುಪಿ: ಚಿರತೆಯೊಂದು ಚಲಿಸುತ್ತಿದ್ದ ಬೈಕ್‌ಗೆ ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್‌‌ನಲ್ಲಿ ನಡೆದಿದೆ.

ಘಟನೆಯಲ್ಲಿ ಚಿರತೆ ಸ್ಥಳದಲ್ಲೇ ಮೃತಪಟ್ಟರೆ ಬೈಕ್ ಸವಾರ ನಂಚಾರ್ ಭಾಸ್ಕರ್ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದಾರೆ.

ಭಾಸ್ಕರ್ ಶೆಟ್ಟಿ ರಾತ್ರಿ ತನ್ನ ಬೈಕ್ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಒಮ್ಮೆಲೇ ಚಿರತೆಯೊಂದು ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಿರತೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದು. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ.

ಹೆಬ್ರಿ ಅರಣ್ಯ ಇಲಾಖೆಯವರು ಸ್ಥಳಕ್ಕಾಗಮಿಸಿ ಮೃತಪಟ್ಟ ಚಿರತೆಯನ್ನು ಪರಿಶೀಲಿಸಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!