Friday, July 24, 2026
spot_imgspot_img
spot_imgspot_img

ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರು ಅಂತಾರಾಜ್ಯ ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು: ನಗರದ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25) ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ (25) ಎಂದು ಗುರುತಿಸಲಾಗಿದೆ.

ನ.14ರಂದು ಮಂಗಳೂರಿಗೆ ಬಂದಿದ್ದ ಇವರು ಮಂಗಳೂರು ರೈಲ್ವೇ ಜಂಕ್ಷನ್ ಪ್ರದೇಶದಲ್ಲಿ ಸುತ್ತಾಡಿದ ಬಳಿಕ ನಾಗುರಿಯ ಬಸ್ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನ.30ರಂದು ಮಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿಯನ್ನು ಪಡೆದ ಪೊಲೀಸರು ಆರೋಪಿಗಳಾದ ಅಲೆಕ್ಸ್ ಡೊಮಿನಿಕ್ ಹಾಗೂ ಅಮಲ್ ಕೃಷ್ಣರನ್ನು ಬಂಧಿಸಿ ಎರಡು ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಮೊತ್ತ 1.23 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ಅಲೆಕ್ಸ್‌ನ ವಿರುದ್ಧ ಕೇರಳದ ಅಲಕ್ಕೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಟ ಮಾಡಿರುವ ಪ್ರಕರಣ ಹಾಗೂ ಅಮಲ್ ಕೃಷ್ಣನ ವಿರುದ್ದ ತಲಶೇರಿ ಹಾಗೂ ಕುರಚೂಂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟ‌ರ್ ಕಳವು ಮಾಡಿದ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!