- Advertisement -
- Advertisement -
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ತೀರ್ಪು ಪ್ರಶ್ನಿಸಿ ಪ್ರಜ್ವಲ್ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ವಾದ-ಪ್ರತಿವಾದ ಆಲಿಸಿದ ಬಳಿಕ ಪ್ರಜ್ವಲ್ ಜಾಮೀನು ಅರ್ಜಿಯನ್ನ ವಜಾಗೊಳಿಸಿದ್ದಾರೆ.

ಜಾಮೀನು ಮಂಜೂರು ಮಾಡಲು ಮತ್ತೆ ಹೈಕೋರ್ಟ್ ನಿರಾಕರಿಸಿದ್ದು, ಬೇಲ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಕೆಳಹಂತದ ನ್ಯಾಯಾಲಯ ಆದೇಶ ಅಮಾನತಿನಲ್ಲಿ ಇರಿಸಿ, ಜಾಮೀನು ನೀಡುವಂತೆ ಮನವಿ ಮಾಡಿದ್ದ ಪ್ರಜ್ವಲ್ ರೇವಣ್ಣ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಪ್ರಜ್ವಲ್ ಗೆ ಮತ್ತೆ ನಿರಾಸೆಯಾಗಿದೆ.
ಡಿಸೆಂಬರ್ 1ರಂದು ನಡೆದ ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದ್ದರು.
- Advertisement -








