- Advertisement -
- Advertisement -

ಬಂಟ್ವಾಳ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ತಪಾಸಣೆ ವೇಳೆ ಲಾರಿಯಲ್ಲಿ ಕೆಂಪು ಕಲ್ಲು ತುಂಬಿಸಿಕೊಂಡು ಸಾಗಿಸುತ್ತಿರುವುದು ಕಂಡುಬಂದಿದ್ದು ವಶಪಡಿಸಿಕೊಂಡಿದ್ದಾರೆ.


ಕುಡ್ತಮುಗೇರು ಎಂಬಲ್ಲಿ ವಿಟ್ಲ ಪೊಲೀಸ್ ಉಪನಿರೀಕ್ಷಕ ರತ್ನಕುಮಾರ್, ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಬೋಳ್ಪದೆ ಕಡೆಯಿಂದ ಕೂಡ್ತಮುಗೇರು ಕಡೆಗೆ ಬರುತ್ತಿದ್ದ KA-12-A-9095 ನೋಂದಣಿಯ ಲಾರಿಯಲ್ಲಿ ಕೆಂಪು ಕಲ್ಲು ತುಂಬಿಸಿ ಸಾಗಿಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಲಾರಿ ಚಾಲಕ ಎನ್.ಸಿ.ಶರೀಪ್ (42) ಎಂಬಾತನಲ್ಲಿ ವಿಚಾರಿಸಿದಾಗ, ಯಾವುದೇ ಪರವಾನಿಗೆ ಅಥವಾ ದಾಖಲಾತಿಗಳಿಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳ ಸಾಗಾಟ ಕಂಡುಬಂದಿರುತ್ತದೆ.

ಲಾರಿ ಚಾಲಕ ಹಾಗೂ ಲೋಡ್ ಸಮೇತ ಲಾರಿಯನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -








