Tuesday, April 30, 2024
spot_imgspot_img
spot_imgspot_img

ವಿಟ್ಲ: ಹಾಸ್ಟೇಲ್ ಅಡುಗೆ ಸಹಾಯಕ ಕೆರೆಗೆ ಹಾರಿ ಆತ್ಮಹತ್ಯೆ

- Advertisement -G L Acharya panikkar
- Advertisement -

ವಿಟ್ಲ: ಅಳಿಕೆ ಸತ್ಯಸಾಯಿ ವಿದ್ಯಾ ಸಂಸ್ಥೆಯ ಹಾಸ್ಟೇಲ್ ನ ಅಡುಗೆ ಸಹಾಯಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ನಡೆದಿದೆ.

ಕಾಸರಗೋಡು ಜಿಲ್ಲೆಯ ಬೆದ್ರಡ್ಕ ನಿವಾಸಿ ನಾರಾಯಣ ಪಾಟಾಲಿ(55) ಮೃತಪಟ್ಟವರು. ಇವರು ಅಳಿಕೆ ಸತ್ಯಸಾಯಿ ಲೋಕ ಸೇವಾ ಕೇಂದ್ರದ ಹಾಸ್ಟೇಲ್ ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.

ಗುರುವಾರ ತಡರಾತ್ರಿಯಿಂದ ಅವರು ನಾಪತ್ತೆಯಾಗಿದ್ದರು. ಅವರನ್ನು ಹುಡುಕಾಡಿದಾಗ ಸಂಸ್ಥೆಗೆ ಸೇರಿದ ಕೆರೆಯ ಬಳಿ ಅವರ ಚಪ್ಪಲಿ ಪತ್ತೆಯಾಗಿತ್ತು.

ಕೆರೆಯಲ್ಲಿ ಸುಮಾರು ಇಪ್ಪತ್ತೆರಡು ಅಡಿಗಿಂತಲೂ ಅಧಿಕ ನೀರು ತುಂಬಿಕೊಂಡಿದ್ದು, ಫ್ರೆಂಡ್ಸ್ ವಿಟ್ದ ಸಂಘಟನೆಯ ಮುರಳೀಧರ ಮತ್ತು ಹೈದರಾಲಿ ಮೇಗಿನಪೇಟೆ ನೇತೃತ್ವದ ಮುಳುಗು ತಜ್ಞರ ತಂಡ ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಮೃತಶರೀರವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

ಅವರು ಕಳೆದ 25 ವರ್ಷಗಳಿಂದ ಮೂರ್ಚೆ ರೋಗದಿಂದ ಬಳಲುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!