Saturday, July 25, 2026
spot_imgspot_img
spot_imgspot_img

ವಿಟ್ಲ: ತೆಂಗಿನ ಕಾಯಿ ಕೀಳುವಾಗ ವಿದ್ಯುತ್‌ ತಂತಿ ತಗಲಿ ಶಾಕ್ ಹೊಡೆದು ವ್ಯಕ್ತಿ ಮೃತ್ಯು

- Advertisement -
- Advertisement -

ವಿಟ್ಲ: ಅಲ್ಯುಮೀನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುವ ವೇಳೆ ಕೊಕ್ಕೆ ವಿದ್ಯುತ್ ತಂತಿಗೆ ತಗಲಿ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕರೋಪಾಡಿ ಗ್ರಾಮದ ನಾರಾಯಣ ನಾಯ್ಕ (45) ಎಂದು ಗುರುತಿಸಲಾಗಿದೆ.

ನಾರಾಯಣ ನಾಯ್ಕರವರು ಡಿ.7ರಂದು ಬೆಳಿಗ್ಗೆ ಕರೋಪಾಡಿ ಗ್ರಾಮದ ಪದ್ಯಾಣ ಗಡಿಜಾಗೆ ಎಂಬಲ್ಲಿರುವ ಮನೆಯ ಎದುರುಗಡೆ ತೆಂಗಿನ ಮರದಿಂದ ಅಲ್ಯೂಮಿನಿಯಂ ಕೊಕ್ಕೆಯಿಂದ ತೆಂಗಿನಕಾಯಿ ಕೀಳುವ ಸಮಯದಲ್ಲಿ ಆಕಸ್ಮಿಕವಾಗಿ ಕೊಕ್ಕೆ ತೆಂಗಿನ ಮರದ ಪಕ್ಕದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಗೆ ತಗಲಿ ಶಾಕ್ ಹೊಡೆದಿದೆ.

ಪರಿಣಾಮ ಬಿದ್ದ ಅವರನ್ನು ಕೂಡಲೇ ತಮ್ಮ ಗಣೇಶ್ ಅವರು ರಿಕ್ಷಾದಲ್ಲಿ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಕರೆದುಕೊಂಡು ಹೋದರು ಆ ವೇಳೆಗಾಗಲೇ ನಾರಾಯಣ ಅವರು ಮೃತಪಟ್ಟಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!