Tuesday, July 28, 2026
spot_imgspot_img
spot_imgspot_img

ಬೆಂಗಳೂರು-ಮಂಗಳೂರು ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

- Advertisement -
- Advertisement -

ಘಾಟಿ ಭಾಗದಲ್ಲಿ ವಿದ್ಯುದ್ದೀಕರಣ ಪೂರ್ಣಗೊಂಡ ಅನಂತರ ಕ್ರಮ: ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲನ್ನು ಓಡಿಸುವ ಅಗತ್ಯವನ್ನು ವಿವರಿಸಿದರು.

ಹಾಸನ ಮತ್ತು ಸಕಲೇಶಪುರ ವಿಭಾಗಗಳಲ್ಲಿ ವಿದ್ಯುದ್ದೀಕರಣ ಕಾರ್ಯವು ಪೂರ್ಣಗೊಳ್ಳುವ ಹಂತದಲ್ಲಿದೆ ಮತ್ತು ವಂದೇ ಭಾರತ್ ಸೇವೆಯ ಮೂಲಕ ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳನ್ನು ಸಂಪರ್ಕಿಸಲು ಇದು ಸೂಕ್ತ ಸಮಯ ಎಂದು ಸಂಸದರು ತಿಳಿಸಿದ್ದಾರೆ.

ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಸಕಲೇಶಪುರ ಘಾಟ್ ವಿಭಾಗದಲ್ಲಿ ರೈಲ್ವೆ ಹಳಿ ವಿದ್ಯುದೀಕರಣ ಪೂರ್ಣಗೊಂಡ ನಂತರ, ಬೆಂಗಳೂರಿನಿಂದ ಕಾರವಾರಕ್ಕೆ ರೈಲು ಸೇವೆಗಳನ್ನು ಸುಧಾರಿಸಲಾಗುವುದು ಮತ್ತು ಈ ಮಾರ್ಗದಲ್ಲಿ ವಂದೇ ಭಾರತ್ ರೈಲನ್ನು ಪರಿಚಯಿಸುವ ಯೋಜನೆಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದರು.

- Advertisement -

Related news

error: Content is protected !!