Wednesday, July 22, 2026
spot_imgspot_img
spot_imgspot_img

ಮಂಗಳೂರು–ಬೆಂಗಳೂರು ವಂದೇ ಭಾರತ್ ರೈಲು ಆರಂಭ- ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ದಿನೇಶ್ ಗುಂಡೂರಾವ್

- Advertisement -
- Advertisement -

ಮಂಗಳೂರು: ಮಂಗಳೂರು–ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಬೇಕೆಂದು ರಾಜ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.


ಈ ಕುರಿತು ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಅವರು, ಮಂಗಳೂರು ಶಿಕ್ಷಣ ಸಂಸ್ಥೆಗಳು, ಉನ್ನತ ಮಟ್ಟದ ಆಸ್ಪತ್ರೆಗಳು ಹಾಗೂ ಉದ್ಯಮಗಳಿಂದ ಕೂಡಿದ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಬೆಂಗಳೂರಿನ ನಂತರ ಪ್ರಮುಖ ನಗರವಾಗಿ ಹೊರಹೊಮ್ಮುತ್ತಿದೆ ಎಂದು ತಿಳಿಸಿದ್ದಾರೆ. ಮಂಗಳೂರು–ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭವಾದರೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುವುದರೊಂದಿಗೆ ಉದ್ಯಮಗಳ ಬೆಳವಣಿಗೆಯಿಗೂ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.


ಹಲವಾರು ಉದ್ಯಮಿಗಳು ಹಾಗೂ ವೃತ್ತಿಪರರು ಬೆಂಗಳೂರು–ಮಂಗಳೂರು ನಡುವಿನ ಪ್ರಯಾಣವನ್ನು ನಿರಂತರವಾಗಿ ನಡೆಸುತ್ತಿದ್ದು, ವೇಗದ ಮತ್ತು ಸುಗಮ ರೈಲು ಸೇವೆ ಇದಕ್ಕೆ ಬಹಳ ಸಹಾಯಕವಾಗಲಿದೆ ಎಂದು ದಿನೇಶ್ ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕ ಸರ್ಕಾರದ ಪರವಾಗಿ ದಿನಕ್ಕೆ ಕನಿಷ್ಠ ಮೂರು ವಂದೇ ಭಾರತ್ ರೈಲುಗಳನ್ನು ಮಂಗಳೂರು–ಬೆಂಗಳೂರು ಮಾರ್ಗದಲ್ಲಿ ಆರಂಭಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!