Monday, June 30, 2025
spot_imgspot_img
spot_imgspot_img

ಸಚಿವರ ಸಂಧಾನ ಯಶಸ್ವಿ: ಖಾಸಗಿ ಶಾಲಾ ಶಿಕ್ಷಕರ ಪ್ರತಿಭಟನೆ ಅಂತ್ಯ

- Advertisement -
- Advertisement -

ಬೆಂಗಳೂರು: ಕೊರೋನಾ ವಾರಿಯರ್ಸ್ ಆಗಿ ಪರಿಗಣಿಸಬೇಕು ಮತ್ತು ಆದ್ಯತೆಯ ಪಟ್ಟಿಯಲ್ಲಿ ಲಸಿಕೆ ನೀಡಬೇಕು ಎಂದು ಆಗ್ರಹಿಸಿ ಖಾಸಗಿ ಶಾಲಾ ಶಿಕ್ಷಕರು ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆ ಕೊನೆಗೊಂಡಿದೆ.

ಸರ್ಕಾರದ ಪರವಾಗಿ ಆರ್ ಅಶೋಕ್ ಮತ್ತು ಬಸವರಾಜ್ ಬೊಮ್ಮಾಯಿ ನಡೆಸಿದ ಮಾತುಕತೆ ಸಫಲವಾಗಿದೆ. 6 ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದೆ.

ಇದಕ್ಕೂ ಮೊದಲು ಮೌರ್ಯ ಸರ್ಕಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನೆ ನಡೆಸಿದ ಶಿಕ್ಷಕರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಲಾಕ್ ಡೌನ್ ನಿಂದಾಗಿ ಹಲವು ಖಾಸಗಿ ಶಾಲಾ ಶಿಕ್ಷಕರಿಗೆ ವೇತನ ದೊರೆಯದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

- Advertisement -

Related news

error: Content is protected !!