Tuesday, July 21, 2026
spot_imgspot_img
spot_imgspot_img

ಚಂಡಮಾರುತದ ಪ್ರಭಾವ: ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

- Advertisement -
- Advertisement -

ತಮಿಳುನಾಡು:ಕರಾವಳಿಯಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಮತ್ತು ಮೈಸೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ತಮಿಳುನಾಡು ಕರಾವಳಿಯಲ್ಲಿ ಬಲಗೊಳ್ಳುತ್ತಿರುವ ಚಂಡಮಾರುತದ ಪ್ರಭಾವದಿಂದ ಶುಕ್ರವಾರ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ ವಿವಿಧ ಪ್ರದೇಶಗಳಲ್ಲಿ ತಾಪಮಾನವು ಮತ್ತೆ ಕುಸಿಯುವ ನಿರೀಕ್ಷೆಯಿದ್ದು, ಇದು ಚಳಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಇತರ ಭಾಗಗಳಲ್ಲೂ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

- Advertisement -

Related news

error: Content is protected !!