- Advertisement -
- Advertisement -
ಮಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದ ಕೆಎಸ್ ಆರ್ ಪಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಕೊಣಾಜೆ ಅಸೈಗೋಳಿಯ ಪೊಲೀಸ್ ವಸತಿ ಗೃಹದಿಂದ ನಾಪತ್ತೆಯಾಗಿದ್ದಾರೆ.
ಅಸೈಗೋಳಿಯ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಏಳನೇ ಬೆಟಾಲಿಯನ್ ನ ಕಾನ್ ಸ್ಟೇಬಲ್ ಆಗಿರುವ ಅನಿಲ್ ಕುಮಾರ್ (29)ನಾಪತ್ತೆಯಾದವರು. ಅನಿಲ್ ಕುಮಾರ್ ಚಿಕ್ಕಮಗಳೂರು ಜಿಲ್ಲೆಯ ಮೂಲದವರಾಗಿದ್ದು ತಾಯಿ, ಪತ್ನಿಯೊಂದಿಗೆ ಅಸೈಗೋಳಿಯ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.
ಮನೆಯಲ್ಲಿ ತಾಯಿ ಮತ್ತು ಪತ್ನಿಯ ನಡುವೆ ಹೊಂದಾಣಿಕೆ ಇರಲಿಲ್ಲ. ಹೀಗಾಗಿ ಪತ್ನಿ ಮುನಿಸಿಕೊಂಡು ತವರು ಮನೆ ಸೇರಿದ್ದರು. ಇದರಿಂದ ಮನನೊಂದಿದ್ದ ಅನಿಲ್ ಅವರು ಗುರುವಾರ ಸಂಜೆಯಿಂದ ಮನೆ ಬಿಟ್ಟು ಹೋಗಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಮನನೊಂದಿದ್ದ ಮಗ ಎಲ್ಲಿ ಹೋಗಿದ್ದಾನೆಂದು ಆತಂಕಗೊಂಡ ತಾಯಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
- Advertisement -