Tuesday, July 28, 2026
spot_imgspot_img
spot_imgspot_img

ಹಾಸನ: ವರದಕ್ಷಿಣೆಗಾಗಿ ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

- Advertisement -
- Advertisement -

ಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೆಚ್.ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಬೇಲೂರು ತಾಲ್ಲೂಕಿನ ಐ.ಹುಣಸೆಕೆರೆ ಗ್ರಾಮದ ಹೆಚ್.ಎಲ್.ಇಂದ್ರ (24) ಮೃತ ಗೃಹಿಣಿ. ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್.ಮೈಲಳ್ಳಿ ಗ್ರಾಮದ ಎಂ.ಹೆಚ್.ಸ್ವಾಮಿ ಜೊತೆ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ.

ಮದುವೆ ವೇಳೆ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ ಹಾಗೂ 1.30 ಲಕ್ಷ ರೂ. ಹಣವನ್ನು ಹೆಚ್.ಎಲ್.ಇಂದ್ರ ಪೋಷಕರು ನೀಡಿದ್ದರು. ಪತಿ ಸ್ವಾಮಿ ಬೇಕರಿ ನಡೆಸುತ್ತಿದ್ದ. ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಬಳಿಕ ಗ್ರಾಮಕ್ಕೆ ಬಂದು ನೆಲೆಸಿದ್ದ. ಆಗಿನಿಂದ ವರದಕ್ಷಿಣೆ ಹಣ ತರುವಂತೆ ಹೆಂಡತಿಗೆ ಪೀಡಿಸುವುದರ ಜೊತೆಗೆ ಸಂದೇಹ ಪಡುತ್ತಿದ್ದ. ಇನ್ನೂ ಮದುವೆಯಾಗಿ ನಾಲ್ಕು ವರ್ಷಗಳಾದರೂ ದಂಪತಿಗೆ ಮಕ್ಕಳಿರಲಿಲ್ಲ. ನಿನ್ನೆ (ಜ.31) ದಂಪತಿ ಮಧ್ಯೆ ಜಗಳವಾಗಿ, ಅತಿರೇಕಕ್ಕೆ ಹೋಗಿ ಪತ್ನಿ ವಿಷ ಸೇವಿಸಿದ್ದಳು. ಬಳಿಕ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಸದ್ಯ ದುದ್ದ ಪೊಲೀಸ್ ಠಾಣೆಯಲ್ಲಿ ಇಂದ್ರ ಪೋಷಕರು ಪತಿ ಸ್ವಾಮಿ, ಅತ್ತೆ ಶಂಕ್ರಮ್ಮ, ಅತ್ತಿಗೆ ಪುಟ್ಟಿ ವಿರುದ್ಧ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ.

- Advertisement -

Related news

error: Content is protected !!