Tuesday, April 30, 2024
spot_imgspot_img
spot_imgspot_img

ಸಧ್ಯಕ್ಕಿಲ್ಲ ಬಿಬಿಎಂಪಿ ಚುನಾವಣೆ: ಹೈಕೋರ್ಟ್ ಆದೇಶ ತಡೆಹಿಡಿದ ಸುಪ್ರೀಂ!

- Advertisement -G L Acharya panikkar
- Advertisement -

ಬೆಂಗಳೂರು: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ ಬಿಬಿಎಂಪಿ ಚುನಾವಣೆಗೆ ಮತ್ತೆ ಮುಂದೂಡಿಕೆಯಾಗಿದೆ.

ಬಿಬಿಎಂಪಿ ಸದಸ್ಯರ ಚುನಾವಣೆ ಶೀಘ್ರ ನಡೆಸಲು ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನ ಸುಪ್ರೀಂ ಪುರಸ್ಕರಿದೆ.

ಈ ಹಿಂದೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಬೋಬ್ಡೆ, ನ್ಯಾ. ಎ.ಎಸ್. ಬೋಪಣ್ಣ & ವಿ.ರಾಮ ಸುಬ್ರಮಣಿಯನ್ ಅವರಿದ್ದ ತ್ರಿಸದಸ್ಯ ಪೀಠ ಈ ಹಿಂದೆ ಆದೇಶಿಸಿತ್ತು.ಕೆಲ ಕಾಲ ವಾದ ಆಲಿಸಿದ ಪೀಠ, ರಾಜ್ಯ ಚುನಾವಣಾ ಆಯೋಗ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ನೀಡಿ ವಿಚಾರಣೆಯನ್ನು 2021ರ ಫೆಬ್ರವರಿ 5ಕ್ಕೆ ಮುಂದೂಡಿಕೆ ಮಾಡಿದೆ. ಇದೇ ವೇಳೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಮುಂದಿನ ಆದೇಶದವರೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಕಾಂಗ್ರೆಸ್ ಪಕ್ಷದ ಪಾಲಿಕೆ ಮಾಜಿ ಸದಸ್ಯ ಎಂ. ಶಿವರಾಜು ಹಾಗೂ ರಾಜ್ಯ ಚುನಾವಣಾ ಆಯೋಗ ಪ್ರತ್ಯೇಕವಾಗಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಪಾಲಿಕೆಗೆ ಚುನಾವಣೆ ನಡೆಸಲು ಡಿಸೆಂಬರ್ 4ರಂದು ಆದೇಶಿಸಿತ್ತು.

ಹೈಕೋರ್ಟ್ ತನ್ನ ತೀರ್ಪಿನಲ್ಲಿ, ರಾಜ್ಯ ಸರ್ಕಾರ ಪಾಲಿಕೆಯನ್ನು ಈಗಿರುವ 198 ವಾರ್ಡ್​ಗಳಿಂದ 243 ವಾರ್ಡ್ ಗಳಿಗೆ ಹೆಚ್ಚಿಸಲು ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವ ಕ್ರಮ ಸರಿ ಇದೆಯಾದರೂ, ಅದು ಈ ಚುನಾವಣೆಗೆ ಅನ್ವಯಿಸುವುದಿಲ್ಲ. ಚುನಾವಣೆಗೆ ಸಿದ್ದತೆಗಳನ್ನು ಆರಂಭಿಸಿದ ಬಳಿಕ ಸರ್ಕಾರ ಕಾಯ್ದೆಗೆ ತಂದಿರುವ ತಿದ್ದುಪಡಿ ತಂದಿದೆ. ಹೀಗಾಗಿ ಹೊಸ ಕಾಯ್ದೆಯು ಈ ಚುನಾವಣೆಗೆ ಅನ್ವಯಿಸುವುದಿಲ್ಲ ಹಾಗೂ ಅದರ ಆಧಾರದಲ್ಲಿ ಚುನಾವಣೆ ಮುಂದೂಡಲು ಬರುವುದಿಲ್ಲ. ಆದ್ದರಿಂದ ಪಾಲಿಕೆಗೆ ಸಂವಿಧಾನದ ವಿಧಿ 243(ಯು) ಪ್ರಕಾರ ಚುನಾವಣೆ ನಡೆಸಬೇಕು ಎಂದು ತೀರ್ಪು ನೀಡಿತ್ತು.

- Advertisement -

Related news

error: Content is protected !!