Wednesday, July 22, 2026
spot_imgspot_img
spot_imgspot_img

ಬೆಳಗಾವಿ: ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್‌ ಸಿರಿಧಾನ್ಯ ಲಡ್ಡು ವಿತರಣೆ

- Advertisement -
- Advertisement -

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್‌ ಸಿರಿಧಾನ್ಯ ಲಡ್ಡು ವಿತರಣೆ ಮಾಡಲಾಗಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್‌ ಸಿರಿಧಾನ್ಯ ಲಡ್ಡು ಪೂರೈಕೆ ಮಾಡಲಾಗಿದೆ.

ಅಂಗನವಾಡಿ ಮಕ್ಕಳ ಆರೋಗ್ಯದ ಜೊತೆಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳ ಚೆಲ್ಲಾಟವಾಡುತ್ತಿದ್ದಾರೆ. ರಾಜ್ಯದ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಲೆಂಬ ಉದ್ದೇಶಕ್ಕೆ ಮಿಲೆಟ್ ಲಡ್ಡು ವಿತರಣೆ ಮಾಡಲಾಗುತ್ತಿದೆ. ಆದರೆ ಪೌಷ್ಟಿಕ ಆಹಾರ ವಿತರಣೆಯಲ್ಲಿ ಅಕ್ರಮ ಬೆಳಕಿಗೆ ಬಂದಿದೆ.

ಬೆಳಗಾವಿಯ ಮೂರು ಅಂಗನವಾಡಿ ಕೇಂದ್ರಗಳಿಗೆ ಕನ್ನಡ ಹೋರಾಟಗಾರ್ತಿ ಕಸ್ತೂರಿಭಾವಿ ಭೇಟಿ ನೀಡಿದ್ದು, ಭೇಟಿಯ ವೇಳೆ ಆರು ತಿಂಗಳ ಹಿಂದೆಯೇ ಎಕ್ಸ್‌ಪೈರ್ಡ್‌ ಆಗಿರುವ ಪದಾರ್ಥಗಳ ವಿತರಣೆ ಮಾಡಿದ್ದು ಕಂಡು ಬಂದಿದೆ. ಈ ವೇಳೆ ತಾವೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಮಾಡಿದ್ದು, ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಹುಳ ಬಿದ್ದ ರವಾ, ಅವಧಿ ಮುಗಿದ ಸಜ್ಜೆ ಲಡ್ಡು, ಸಾಂಬಾರ್ ಪುಡಿ ಕಾಣುತ್ತಿದೆ.

2025ರ ಅಕ್ಟೋಬರ್‌ನಲ್ಲಿ ಎಕ್ಸ್‌ಪೈರ್ಡ್‌ ಆಗಿರುವ ಮಿಲೆಟ್ ಲಡ್ಡು ಈಗ ವಿತರಣೆ ಮಾಡಲಾಗಿದ್ದು, ಅಧಿಕಾರಿಗಳು, ಅಂಗನವಾಡಿ ಸಹಾಯಕಿಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!