Monday, July 27, 2026
spot_imgspot_img
spot_imgspot_img

ಹಾಸನ: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು!

- Advertisement -
- Advertisement -

ಹಾಸನ: ತರಗತಿಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಶಿಕ್ಷಕರನ್ನು ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ಅವರು ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರು ಕೂಡಲೇ ನೆರವಿಗೆ ಧಾವಿಸಿ ಅಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದರೆ ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!