- Advertisement -
- Advertisement -
ತುಮಕೂರು: ಹಳೆ ಗುಜರಿ ಸಾಮಾನುಗಳನ್ನು ಸಂಗ್ರಹಿಸಿದ್ದ ಮಳಿಗೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಕ್ಯಾತಸಂದ್ರ ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಈ ಘಟನೆ ನಡೆದಿದೆ.
ಹಿರೇಹಳ್ಳಿ ಕೈಗಾರಿಕಾ ಪ್ರದೇಶದ ಹತ್ತರದದ ಸಣ್ಣಪ್ಪನಪಾಳ್ಯದ ಬಳಿ ಇರುವ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಮೂರು ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
- Advertisement -