- Advertisement -
- Advertisement -



ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಕ್ರಾಸ್ ಬಳಿ ಆಲ್ಟೋ ಕಾರು ಹೊತ್ತಿ ಉರಿದಿದ್ದು, ಅವಘಡದಲ್ಲಿ 70 ವರ್ಷದ ಚಾಲಕ ಸಜೀವ ದಹನವಾಗಿದ್ದಾರೆ.
ಪೆನುಮಲೆ ಗ್ರಾಮದ ಉದಯ್ ಕುಮಾರ್(70) ಮೃತ ಚಾಲಕ ಎಂದು ತಿಳಿದು ಬಂದಿದೆ. ಕಳೆದ ರಾತ್ರಿ ಬಾಗೇಪಲ್ಲಿಯಿಂದ ಸ್ವಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಕಾರಿನಲ್ಲಿ ಯಾವುದೇ ಯಾಂತ್ರಿಕ ದೋಷ ಅಥವಾ ಅಪಘಾತದ ಕುರುಹುಗಳು ಕಂಡುಬಂದಿಲ್ಲ.ಹೀಗಾಗಿ ಈ ಘಟನೆ ಆತ್ಮಹತ್ಯೆಯೋ ಅಥವಾ ಆಕಸ್ಮಿಕವೋ ಎಂಬ ಅನುಮಾನ ವ್ಯಕ್ತವಾಗಿದೆ.
ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
- Advertisement -








